Surprise Me!

ಅನಿತಾ-ಡಿಕೆಶಿ ಮಾತುಕತೆಗೆ ವಿಶೇಷ ಅರ್ಥಬೇಡ: ಎಚ್ಡಿಕೆ | Oneindia Kannada

2017-11-27 530 Dailymotion

ರಾಮನಗರ, ನವೆಂಬರ್ 26: ನಮ್ಮ ಕುಟುಂಬದಿಂದ ಇಬ್ಬರೇ ಸ್ಪರ್ಧೆ ಮಾಡಬೇಕೆಂಬ ನಿಲುವು ನಮ್ಮದು. ಆ ಕ್ಷೇತ್ರದಲ್ಲೇ ಯಾರನ್ನಾದರೂ ಒಬ್ಬರನ್ನ ಅಭ್ಯರ್ಥಿ ಮಾಡಿ ಎಂದು ಸೂಚಿಸಿದ್ದೆ. ಆದರೆ, ಚನ್ನಪಟ್ಟಣ ಕ್ಷೇತ್ರದ ಕಾರ್ಯಕರ್ತರು ಮುಖಂಡರು ಅನಿತಾರನ್ನೇ ಅಭ್ಯರ್ಥಿ ಮಾಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಕಾರ್ಯಕರ್ತರ ಒತ್ತಾಯದಿಂದ ಒಂದು ರೀತಿಯ ಸಂದಿಗ್ಧ ಪರಿಸ್ಥಿತಿ ಎದುರಾಗಿದೆ. ದೇವೇಗೌಡರ ಜೊತೆ ಚರ್ಚಿಸಿ ಕೆಲವೇ ದಿನಗಳಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಪ್ರಕಟಿಸುತ್ತೆವೆ ಎಂದು ಎಚ್.ಡಿ.ಕುಮಾರಸ್ವಾಮಿಯವರು ರಾಮನಗರದ ಮರಳವಾಡಿಯಲ್ಲಿ ಹೇಳಿಕೆ ನೀಡಿದರು.ನವೆಂಬರ್ 16 ರಂದು ಮರಳವಾಡಿಯಲ್ಲಿ ಶಾಲಾ ಬಸ್ ಅಪಘಾತದಲ್ಲಿ ಮೃತಪಟ್ಟಿದ್ದ ಚರಣ್ ಗೌಡನ ಮನೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿ ಮಗುವಿನ ಪೋಷಕರಿಗೆ ಸಾಂತ್ವನ ಹೇಳಿದರು.ಇತ್ತೀಚೆಗೆ ಕನಕ ಉತ್ಸವ ಕಾರ್ಯಕ್ರಮದಲ್ಲಿ ಅನಿತಾ ಕುಮಾರಸ್ವಾಮಿ ಹಾಗೂ ಸಚಿವ ಡಿಕೆ ಶಿವಕುಮಾರ್ ಅವರು ಮಾತನಾಡಿದ್ದರ ಬಗ್ಗೆ ಕೂಡಾ ಎಚ್ ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದರು.

No need for any kind of internal coalition before elections said: JDS state president HD Kumaraswamy. HD Kumaraswamy in Maralawadi said, JDS activists are demanding Anitha Kumaraswamy to contest from Channapatna constituency, HD Deve Gowda will take decision on this...watch this video