Including Isckon temple in Bengaluru lakhs devotees participated for special pooja on the occasion of Vaikunta Ekadashi in Various temples on Friday.
ವೈಕುಂಠ ಏಕಾದಶಿಯು ಪ್ರತಿ ವರ್ಷದ ಸಡಗರ, ಭಕ್ತರು ಎಲ್ಲೋ ಇರುವ ದೇವರನ್ನು ಹುಡುಕಿಕೊಂಡು ಬಂದು ನಮ್ಮೊಂದಿಗೇ ಇದ್ದಾನೆ ಎನ್ನುವ ಭಾವವನ್ನು ವ್ಯಕ್ತಪಡಿಸುತ್ತಾರೆ.ದೇಗುಲದ ವೈಕುಂಠ ದ್ವಾರದಲ್ಲಿ ನಿಂತು ಭಕ್ತರು ಮೋಕ್ಷಕ್ಕಾಗಿ ಪ್ರಾರ್ಥಿಸುವುದು. ಸ್ವಾಮಿಯ ಅಲಂಕಾರವನ್ನು ನೋಡುವುದೇ ಚಂದ.ವೈಕುಂಠ ಏಕಾದಶಿ ಇದರಲ್ಲಿ ಎರಡು ಪದಗಳು ಸೇರಿಕೊಂಡಿದೆ, ಒಂದು ವೈಕುಂಠ ಎಂದರೆ ವಿಷ್ಣುಲೋಕ. ವಿಷ್ಣುವಿಗೆ ವೈಕುಂಠ ಎಂದು ಹೆಸರು ಬರಲು ಕಾರಣ ಚಾಕ್ಷುಷ ಮನ್ವಂತರದಲ್ಲಿ ವಿಷ್ಣುವು ವಿಕುಂಠ ಎಂಬ ಸ್ತ್ರೀ ಯಲ್ಲಿ ಅವತರಿಸಿದನು. ಇದರಿಂದ ನಾರಾಯಣನಿಗೆ ವೈಕುಂಠನೆಂಬ ಹೆಸರು ಬಂದಿದೆ ಎಂದು ಮಹಾಭಾರತದ ಶಾಂತಿಪರ್ವದಿಂದ ತಿಳಿದುಬರುತ್ತದೆ. ವಿಷ್ಣು ಸಹಸ್ರನಾಮದಲ್ಲೂ ವೈಕುಂಠ ಎಂಬ ಹೆಸರಿನ ಉಲ್ಲೇಖವಾಗಿದೆ.ಬೆಂಗಳೂರಿನಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ಸಾಕಷ್ಟು ದೇವಸ್ಥಾನಗಳಲ್ಲಿ ಪೂಜೆಗಳು ಪ್ರಾರಂಭವಾಗಿದೆ. ಎಲ್ಲ ದೇವಸ್ಥಾನಗಳಲ್ಲಿಯೂ ವೈಕುಂಠ ದ್ವಾರಗಳನ್ನು ನಿರ್ಮಿಸಲಾಗಿದ್ದು, ಮುಂಜಾನೆ 4 ಗಂಟೆಯಿಂದಲೇ ದರ್ಶನ ಆರಂಭಗೊಂಡಿದೆ. ರಾತ್ರಿ 10 ಗಂಟೆಯವರೆಗೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಸ್ಕಾನ್ ದೇವಸ್ಥಾನ, ವೈಯಾಲಿಕಾವಲ್ ನ ತಿರುಪತಿ ತಿರುಮಲ ದೇವಸ್ಥಾನ,ಕೋಟೆ ವೆಂಕಟೇಶ್ವರ ಸ್ವಾಮಿ, ಜೆಪಿನಗರದ ತಿರುಪತಿ ದೇವಸ್ಥಾನ ಸೇರಿದಂತೆ ನಗರದ ನಾನಾ ದೇವಸ್ಥಾನಗಳಲ್ಲಿ ವಿಶೇಷ ವೈಕುಂಠ ಏಕಾದಶಿ ಪೂಜೆ ನಡೆಯುತ್ತಿದೆ.