ಹಾಸನ: ದುಷ್ಕರ್ಮಿಗಳ ಪೈಶಾಚಿಕ ಕೃತ್ಯಕ್ಕೆ ರೈತನ ತೆಂಗಿನ ತೋಟ ಬೆಂಕಿಗಾಹುತಿಯಾದ ಘಟನೆ ಭಾನುವಾರ ರಾತ್ರಿ ಜರುಗಿದೆ. ಹಾಸನ ತಾಲೂಕಿನ ಕಮ್ಮರಿಗೆ ಗ್ರಾಮದ ರೈತ ಜಯರಾಮ್ ಅವರಿಗೆ ಸೇರಿದ ಸುಮಾರು 50ಕ್ಕೂ ಹೆಚ್ಚು ತೆಂಗಿನ ಮರಗಳನ್ನು ಕೆಲವು ದುಷ್ಕರ್ಮಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ಕಳೆದ ಎಂಟು ವರ್ಷಗಳಿಂದ ನೀರುಣಿಸಿ ಮಕ್ಕಳಂತೆ ಸಾಕಿ ಬೆಳೆಸಿದ್ದ ತೆಂಗಿನ ಗಿಡಗಳು ಕಿಡಿಗೇಡಿಗಳ ಕೃತ್ಯಕ್ಕೆ ಭಸ್ಮವಾಗಿವೆ.
ತೆಂಗಿನ ತೋಟದಲ್ಲಿ ಬೆಳೆದಿದ್ದ ಒಣಗಿದ ಜೋಳಕ್ಕೆ ಬೆಂಕಿ ಇಟ್ಟ ಕಾರಣ ತೆಂಗಿನ ಮರಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ. ಬೇಸಿಗೆ ಸಮಯದಲ್ಲಿ ಟ್ಯಾಂಕರ್ ಮೂಲಕ ನೀರನ್ನು ಹಾಯಿಸಿ ತೆಂಗಿನ ಗಿಡಗಳನ್ನು ಬೆಳೆಸಿದ್ದ ರೈತ ಜಯರಾಮ್, ಇನ್ನೊಂದೆರಡು ವರ್ಷಗಳಲ್ಲಿ ಫಲ ಸಿಗುವ ನಿರೀಕ್ಷೆಯಲ್ಲಿದ್ದರು. ಅಷ್ಟರೊಳಗೆ ಕೆಲ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರಿಂದ ರೈತ ಕಂಗಾಲಾಗಿದ್ದಾನೆ.
ಸ್ಥಳಕ್ಕೆ ಕೂಡಲೇ ಕಂದಾಯ ಮತ್ತು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕು. ಫಸಲಿಗೆ ಬರುತ್ತಿದ್ದ ತೆಂಗಿನ ಮರಗಳನ್ನು ಕಳೆದುಕೊಂಡಿರುವ ನಮಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ರೈತ ಮನವಿ ಮಾಡಿದ್ದಾನೆ.
ಇವುಗಳನ್ನೂ ಓದಿ: