ಬೆಳಿಗ್ಗೆ ಮನೆಯಿಂದ ಹೊರಗೆ ಹೋದ ನಾರಾಯಣಪ್ಪ ಎಂಬ ವ್ಯಕ್ತಿ ಸ್ವಿಫ್ಟ್ ಕಾರಿನ ಮುಂದಿನ ಸೀಟಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಮುಖ ಮತ್ತು ಎದೆ ಭಾಗದಲ್ಲಿ ಗಾಯಗಳು ಕಂಡುಬಂದಿದ್ದು, ಕಿವಿಯಲ್ಲಿ ರಕ್ತ ಮತ್ತು ಕುತ್ತಿಗೆ ಭಾಗದಲ್ಲಿ ರಕ್ತದ ಕಲೆಗಳಿರುವುದಾಗಿ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ಕಾರಣದಿಂದ ಯಾರೋ ಹತ್ಯೆ ಮಾಡಿರಬಹುದೆಂಬ ಅನುಮಾನ ವ್ಯಕ್ತವಾಗಿದೆ. ಕುಟುಂಬಸ್ಥರು ಕಣ್ಣೀರಿಡುತ್ತಿದ್ದು, ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಸಾವಿನ ನಿಜವಾದ ಕಾರಣ ತಿಳಿಯಲು ತನಿಖೆ ಮುಂದುವರಿದಿದೆ.