Surprise Me!

ರಾಮಮಂದಿರ ದೇಣಿಗೆ ಹಣ ಕಳವು ಪ್ರಕರಣ; ಮೋದಿ ಮೌನಿ ಬಾಬಾ ಆಗಿದ್ದಾರೆ : ವಿ. ಎಸ್. ಉಗ್ರಪ್ಪ

2026-06-27 2 Dailymotion

ಬಳ್ಳಾರಿ : ಅಯೋಧ್ಯೆಯ ಶ್ರೀರಾಮ ಮಂದಿರದ ದೇಣಿಗೆ ಹಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ವಿ. ಎಸ್. ಉಗ್ರಪ್ಪ ಅವರು ಬಿಜೆಪಿ, ಆರ್‌ಎಸ್‌ಎಸ್‌, ವಿಶ್ವ ಹಿಂದೂ ಪರಿಷತ್ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. 

ಬಳ್ಳಾರಿ ನಗರದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, 'ಶ್ರೀರಾಮ ಮಂದಿರವು ದೇಶದ ಅಸ್ಮಿತೆ ಹಾಗೂ ನಂಬಿಕೆಯ ಪ್ರತೀಕವಾಗಿದೆ. ಅಂತಹ ಪವಿತ್ರ ಸ್ಥಳದಲ್ಲಿ ದೇಣಿಗೆ ಹಣದ ದುರುಪಯೋಗ ಅಥವಾ ಕಳವು ನಡೆದಿರುವ ಆರೋಪಗಳು ಕೇಳಿಬಂದಿರುವುದು ಅತ್ಯಂತ ಗಂಭೀರ ವಿಷಯ' ಎಂದು ಹೇಳಿದರು.

'ರಾಮನ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿ ನಾಯಕರು, ರಾಮಮಂದಿರದಲ್ಲಿ ಇಷ್ಟೊಂದು ದೊಡ್ಡ ಹಗರಣದ ಆರೋಪ ಕೇಳಿಬಂದರೂ ಮೌನ ವಹಿಸಿದ್ದಾರೆ. ಮಂದಿರ ನಿರ್ಮಾಣಕ್ಕಾಗಿ ಸಾವಿರಾರು ಕೋಟಿ ರೂಪಾಯಿ ಸಂಗ್ರಹಿಸಲಾಗಿತ್ತು. ಈ ಪ್ರಕರಣದಲ್ಲಿ ಸಂಪತ್ ರಾಯ್, ಮಿಶ್ರಾ ಸೇರಿದಂತೆ ಹಲವರ ಪಾತ್ರದ ಕುರಿತು ಸಮಗ್ರ ತನಿಖೆಯಾಗಬೇಕು' ಎಂದು ಆಗ್ರಹಿಸಿದರು.

'ಇದು ಶತಮಾನದ ಅತಿದೊಡ್ಡ ಹಗರಣಗಳಲ್ಲಿ ಒಂದಾಗಿದೆ. ಈ ಘಟನೆಯಿಂದ ದೇಶದ ಸಂಸ್ಕೃತಿ ಹಾಗೂ ವಿಶ್ವದ ಮುಂದೆ ಭಾರತದ ಗೌರವಕ್ಕೆ ಧಕ್ಕೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಕುರಿತು ದೇಶದ ಜನರಿಗೆ ಸ್ಪಷ್ಟನೆ ನೀಡಬೇಕು. ಮೋದಿ ಅವರು ಮೌನಿ ಬಾಬಾ ಆಗಿದ್ದಾರೆ. ಆರ್‌ಎಸ್‌ಎಸ್‌, ಬಿಜೆಪಿ ಹಾಗೂ ವಿಶ್ವ ಹಿಂದೂ ಪರಿಷತ್ ನಾಯಕರು ಏಕೆ ಮೌನವಾಗಿದ್ದಾರೆ?' ಎಂದು ಪ್ರಶ್ನಿಸಿದರು.

ಇದನ್ನೂ ಓದಿ : ಅಯೋಧ್ಯೆ ಶ್ರೀರಾಮ ಮಂದಿರದ ದೇಣಿಗೆ ಪ್ರಕರಣ: ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ