ಆಂಧ್ರದ ಚಿತ್ತೂರಿನ ವಿ.ಕೋಟಾ ಗಡಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬೈಕಿಗೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಅಣ್ಣ ಮತ್ತು ತಂಗಿ ದುರ್ಮರಣ ಹೊಂದಿದ್ದಾರೆ. ಲಾರಿಯ ಅಡಿಯಲ್ಲಿ ಸಿಲುಕಿದ ಮೃತದೇಹವನ್ನು ಹೊರತೆಗೆಯಲು ಸಾಕಷ್ಟು ಕಷ್ಟಪಡಬೇಕಾಯಿತು. ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಅಣ್ಣ ಬಾಲಾಜಿ ಮತ್ತು ತಂಗಿ ಮಹಾಶ್ರೀ ಈ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ದುರಂತ ಸುದ್ದಿ ಕುಟುಂಬಸ್ಥರಲ್ಲಿ ತೀವ್ರ ದುಃಖ ಉಂಟುಮಾಡಿದೆ.