ದೇವನಹಳ್ಳಿ(ಬೆಂಗಳೂರು ಗ್ರಾಮಾಂತರ): ಎಸ್ಟಿಆರ್ಆರ್ ರಸ್ತೆಯಲ್ಲಿ ಭೀಕರ ಸರಣಿ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ದೃಶ್ಯ ನೋಡಿದವರ ಎದೆ ಝಲ್ ಎನ್ನಿಸುವಷ್ಟು ಭಯಾನಕವಾಗಿದೆ.
ದೇವನಹಳ್ಳಿ ತಾಲೂಕಿನ ಸಾವಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 648ರಲ್ಲಿ ಇಂದು ಬೆಳಗ್ಗೆ ಸುಮಾರು 10 ಗಂಟೆಗೆ ಘಟನೆ ನಡೆದಿದೆ.
ಎರಡು ಕಾರು ಮತ್ತು ಒಂದು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಬೈಕ್ ಸವಾರನ ಕಾಲು ತುಂಡಾಗಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಮಂತ್ರಾಲಯದ ರಾಯದ ದರ್ಶನ ಮುಗಿಸಿಕೊಂಡು ಬರುತ್ತಿದ್ದ ಕಾರು, ಮುಂದೆ ಹೋಗುತ್ತಿದ್ದ ಬೈಕ್ಗೆ ಗುದ್ದಿದೆ. ಆ ನಂತರ ಮತ್ತೊಂದು ಕಾರಿಗೆ ಗುದ್ದಿ ಪಲ್ಟಿಯಾಗಿದೆ. ಬೈಕ್ ಸವಾರನ ಕಾಲು ಮುರಿದಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಭೀಕರ ರಸ್ತೆ ಅಪಘಾತದ ಇತ್ತೀಚಿನ ಸುದ್ದಿಗಳು: