Surprise Me!

ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ವಾರ್ಡ್‌ಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಆರಂಭ

2026-06-30 0 Dailymotion

ಚಿಕ್ಕಮಗಳೂರು: ರಾಜ್ಯಾದ್ಯಂತ ಇಂದಿನಿಂದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಅಭಿಯಾನಕ್ಕೆ ಚಾಲನೆ ದೊರೆತಿದ್ದು, ಜಿಲ್ಲೆಯಲ್ಲಿಯೂ ಎಲ್ಲಾ ವಾರ್ಡ್‌ಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಆರಂಭವಾಗಿದೆ. 

ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ಈ ವಿಶೇಷ ಅಭಿಯಾನದಡಿ ಬೂತ್ ಮಟ್ಟದ ಅಧಿಕಾರಿಗಳು (BLO) ಹಾಗೂ ಬೂತ್ ಮಟ್ಟದ ಏಜೆಂಟ್‌ಗಳು (BLA-1) ಮನೆ ಮನೆಗೆ ತೆರಳಿ ಮತದಾರರ ವಿವರಗಳನ್ನು ಪರಿಶೀಲಿಸಿ ಅಗತ್ಯ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ. 

ಈ ವೇಳೆ ಮತದಾರರ ಹೆಸರು ಸೇರ್ಪಡೆ, ತಿದ್ದುಪಡಿ, ವಿಳಾಸ ಬದಲಾವಣೆ ಹಾಗೂ ಹೆಸರು ಕೈ ಬಿಡುವ ಕುರಿತು ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ. ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು ಹಾಗೂ ಅನರ್ಹ ಅಥವಾ ನಕಲಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವುದು ಈ ವಿಶೇಷ ಪರಿಷ್ಕರಣೆ ಅಭಿಯಾನದ ಪ್ರಮುಖ ಉದ್ದೇಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಿಕ್ಕಮಗಳೂರು ನಗರದ ನೆಹರು ನಗರ ಸೇರಿದಂತೆ ವಿವಿಧ ವಾರ್ಡ್‌ಗಳಲ್ಲಿ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ಪರಿಷ್ಕರಣೆ ಪ್ರಕ್ರಿಯೆಯ ಕುರಿತು ಮಾಹಿತಿ ನೀಡುತ್ತಿದ್ದಾರೆ. ಸಾರ್ವಜನಿಕರು ಸಹ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದು, ಅಗತ್ಯ ದಾಖಲೆಗಳನ್ನು ಸಲ್ಲಿಸಿ ಮತದಾರರ ಪಟ್ಟಿಯನ್ನು ನವೀಕರಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಶಿಕಾರಿಪುರದ ನಿವಾಸದಲ್ಲಿ SIR ಎನ್ಯುಮರೇಷನ್‌ ಅರ್ಜಿ ಭರ್ತಿ ಮಾಡಿದ ಬಿ.ವೈ.ವಿಜಯೇಂದ್ರ: ವಿಡಿಯೋ - B Y VIJAYENDRA