ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ, ಮೃತರ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ ನೀಡಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ. 2025ರ ಸೆಪ್ಟೆಂಬರ್ನಲ್ಲಿ ಆಯೋಜಿಸಲಾದ ರ್ಯಾಲಿಯ ಸಂದರ್ಭದಲ್ಲಿ ಸಂಭವಿಸಿದ ಈ ದುರಂತದಲ್ಲಿ 41 ಮಂದಿ ಮೃತಪಟ್ಟಿದ್ದು, 140ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ 31 ಕುಟುಂಬಗಳಿಗೆ ಸರ್ಕಾರಿ ಉದ್ಯೋಗ ನೀಡಲು ಸರ್ಕಾರ ಮುಂದಾಗಿದೆ.