Surprise Me!

ಲಾವಣ್ಯ ಕೊಲೆ ಪ್ರಕರಣ: ನ್ಯಾಯಕ್ಕಾಗಿ ನವ ಸಹಜ ಸಮುದಾಯದ ತೀವ್ರ ಪ್ರತಿಭಟನೆ

2026-07-18 0 Dailymotion

ಬಂಡ್ವಾಳದಲ್ಲಿ ಲಾವಣ್ಯ ಕೊಲೆ ಪ್ರಕರಣದ ವಿರುದ್ಧ ನವ ಸಹಜ ಸಮುದಾಯದ ಸದಸ್ಯರು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಮಂಗಳೂರಿನ ಲಾವಣ್ಯ ಕುಟುಂಬಕ್ಕೆ ತ್ವರಿತ ನ್ಯಾಯ ನೀಡಬೇಕೆಂದು ಒತ್ತಾಯಿಸಿದ್ದಾರೆ. ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ನಡೆದ ಈ ಹತ್ಯೆಯಲ್ಲಿ ಆರೋಪಿ ಬಸ್ ನಿಲ್ದಾಣದೊಳಗೆ ಸಂತ್ರಸ್ತೆಯನ್ನು ಅಟ್ಟಾಡಿಸಿಕೊಂಡು ಹೋಗಿ ಹತ್ಯೆ ಮಾಡಿದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಆರೋಪಿಯನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ಗೃಹಮಂತ್ರಿಯ ವಿರುದ್ಧವೂ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.