ಬೆಂಗಳೂರಿನಲ್ಲಿ ಫುಟ್ಪಾತ್ ತೆರವು ಕಾರ್ಯಾಚರಣೆ ವೇಳೆ ಶಿವಾಜಿನಗರ ಬಸ್ ನಿಲ್ದಾಣದ ಬಳಿ ಅಧಿಕಾರಿಗಳ ಮೇಲೆ ಹಲ್ಲೆ ನಡೆದಿದೆ. ಫುಟ್ಪಾತ್ ತೆರವು ಮಾಡಲು ತೆರಳಿದ ಸಹಾಯಕ ಕಾರ್ಯಪಾಲಕ ಅಭಿಯಂತರ ಅಧಿಕಾರಿ ಸೇರಿದಂತೆ ಸಿಬ್ಬಂದಿಗಳ ಮೇಲೆ ಕಿಡಿಗೇಡಿ ವ್ಯಾಪಾರಿಗಳು ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಧಿಕಾರಿಗಳಿಗೆ ಗುದ್ದು ಕೊಟ್ಟು ತಳ್ಳಿ ಓಡಿ ಹೋದ ಆರೋಪಿಗಳನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಲಾಗಿದ್ದು, ಪೊಲೀಸರು ಕೂಡ ಕ್ರಮ ಕೈಗೊಂಡಿದ್ದಾರೆ. ಬೆಂಗಳೂರಿನ ಹಲವು ಭಾಗಗಳಲ್ಲಿ ಫುಟ್ಪಾತ್ ತೆರವು ಕಾರ್ಯಾಚರಣೆ ವೇಳೆ ಇಂತಹ ಘಟನೆಗಳು ನಡೆಯುತ್ತಿವೆ.