ಬೆಂಗಳೂರಿನ ಶಿವಾಜಿ ನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ BBMP ಅಧಿಕಾರಿಗಳ ಮೇಲೆ ಹಲ್ಲೆ ನಡೆದಿದೆ. 'ನಮ್ಮ ಕರ್ನಾಟಕ ಸೇನೆ' ಸಂಘಟನೆಯ ಬಸವರಾಜ್ ಎಂಬಾತ ಪೆಪ್ಪರ್ ಸ್ಪ್ರೇ ಮತ್ತು ಹೆಲ್ಮೆಟ್ ಬಳಸಿ ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಟ್ರ್ಯಾಕ್ಟರ್ ಮತ್ತು JCB ಚಾಲಕರು ಸೇರಿ ಹಲವು ಅಧಿಕಾರಿಗಳು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, 307 ಸೆಕ್ಷನ್ ಅಡಿ ಕೇಸ್ ದಾಖಲಿಸಿ ಬಸವರಾಜನನ್ನು ತಕ್ಷಣ ಬಂಧಿಸಲು ಸೂಚನೆ ನೀಡಲಾಗಿದೆ. DCP ವಿಕ್ರಮ್ ಅಮ್ಚೆ ಮತ್ತು ಶಿವಾಜಿ ನಗರ ಶಾಸಕ ರಿಜ್ವಾನ್ ಅರ್ಷದ್ ಹಲ್ಲೆಯನ್ನು ಖಂಡಿಸಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.