ಯಾದಗಿರಿ ಜಿಲ್ಲೆಯಲ್ಲಿ 16,116 ಗರ್ಭಗಳು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭಾ ಮಾಡಿದ ವರದಿಯ ಬಿಗ್ ಇಂಪ್ಯಾಕ್ಟ್ ಆಗಿದೆ. ಮಾನವ ಹಕ್ಕುಗಳ ಆಯೋಗದಲ್ಲಿ ಸ್ವಯಂ ಪ್ರೇರಿತ ದೂರನ್ನು ದಾಖಲಿಸಿಕೊಳ್ಳಲಾಗಿದೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದ್ದು, ವಿಚಾರಣೆ ನಡೆಸಿ ಸೆಪ್ಟೆಂಬರ್ 16ರ ಒಳಗೆ ವರದಿ ಸಲ್ಲಿಸುವಂತೆ ಆದೇಶಿಸಲಾಗಿದೆ.