Surprise Me!

ಗೋಕಾಕ್‌ನಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಭೀಕರ ಅಪಘಾತ: ಮೂವರು ಮೃತ, ಚಾಲಕ ಪರಾರಿ

2026-08-06 0 Dailymotion

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರು ಪ್ರದೇಶದಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ತಾಯಿ, ನಾಲ್ಕು ವರ್ಷದ ಮಗು ಮತ್ತು ತಂದೆ ಸೇರಿ ಇಡೀ ಕುಟುಂಬ ಗಾಯಗೊಂಡಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿಡಕಲ್‌ನಿಂದ ಗೋಕಾಕ್‌ಗೆ ತೆರಳುತ್ತಿದ್ದ ಬೈಕ್‌ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ ಬಸ್ ಚಾಲಕ ಘಟನಾ ಸ್ಥಳದಿಂದ ಪರಾರಿಯಾಗಿದ್ದಾನೆ.