ಚಾಮರಾಜನಗರದ ಕಾವೇರಿ ವನ್ಯಧಾಮದ ಶಾಕ್ಯಾ ಪ್ರದೇಶದಲ್ಲಿ ವನ್ಯಪ್ರಾಣಿಗಳನ್ನು ಬೇಟೆಯಾಡಲು ಬಂದ ಮೂವರು ಬೇಟೆಗಾರರನ್ನು ಅರಣ್ಯ ಸಿಬ್ಬಂದಿ ಎನ್ಕೌಂಟರ್ ಮಾಡಿದ್ದಾರೆ. ಆಂತೋನಿ ಸ್ವಾಮಿ, ಪಿಚರ ಮತ್ತು ಕುಮಾರ ಎಂಬ ಮೂವರು ಬೇಟೆಗಾರರು ಅರಣ್ಯ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ ಗುಂಡಿನ ಚಕಮಕಿಯಲ್ಲಿ ಮೂವರೂ ಮೃತಪಟ್ಟಿದ್ದಾರೆ. ಒಬ್ಬ ಅರಣ್ಯ ಸಿಬ್ಬಂದಿಗೂ ಗಾಯವಾಗಿದೆ. ಈ ಘಟನೆಯ ಬಳಿಕ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಅರಣ್ಯ ಇಲಾಖೆ ಕಚೇರಿ ಮೇಲೆ ದಾಳಿ ಮಾಡಿ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ.