Surprise Me!

ಚಾಮರಾಜನಗರ: ಹನೂರು ಅರಣ್ಯದಲ್ಲಿ ಬೇಟೆಗಾರರ ಎನ್‌ಕೌಂಟರ್, ಮೂವರು ಮೃತ

2026-08-15 0 Dailymotion

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಅರಣ್ಯ ಪ್ರದೇಶದಲ್ಲಿ ವನ್ಯಜೀವಿ ಬೇಟೆಗಾರರು ಮತ್ತು ಅರಣ್ಯ ಅಧಿಕಾರಿಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ. ಒಬ್ಬ ಅರಣ್ಯ ಸಿಬ್ಬಂದಿಗೆ ಗಾಯವಾಗಿದ್ದು, ಒಬ್ಬ ಬೇಟೆಗಾರ ಪರಾರಿಯಾಗಿದ್ದಾನೆ. ಮೃತರ ಶವಗಳನ್ನು ಕೆ.ಆರ್. ಆಸ್ಪತ್ರೆಗೆ ರವಾನಿಸಲಾಗಿದ್ದು, ಗಾಯಗೊಂಡ ಸಿಬ್ಬಂದಿಗೆ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಎನ್‌ಕೌಂಟರ್ ನಕಲಿ ಎಂದು ಮೃತರ ಸಂಬಂಧಿಕರು ಆರೋಪಿಸಿದ್ದು, ಸ್ಥಳೀಯರು ಉಪ ವಲಯ ಅರಣ್ಯಾಧಿಕಾರಿ ಕಚೇರಿ ಮೇಲೆ ದಾಳಿ ನಡೆಸಿ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗ ಶೆಟ್ಟಿ ಘಟನೆಯ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.