ಪುತ್ತೂರು ತಾಲೂಕಿನ ದರ್ಬೆಯ ಡಿಜಿಟಲ್ ಸೇವಾ ಕೇಂದ್ರದಲ್ಲಿ ಸಿಬ್ಬಂದಿ ಮತ್ತು ಗ್ರಾಹಕಿ ಫಾತಿಮತ್ ನಡುವೆ ತೀವ್ರ ಗಲಾಟೆ ನಡೆದಿದೆ. ಗ್ರಾಹಕಿ ಜೆರಾಕ್ಸ್ ಮಾಡಿಸಲು ಬಂದಾಗ ಅಂಗಡಿ ಮಾಲೀಕ ಸುದರ್ಶನ್ ಪೈ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಘಟನೆಯ ಮಾಹಿತಿ ತಿಳಿದ ಜನರು ಅಂಗಡಿ ಮುಂದೆ ಸೇರಿ ಎರಡೂ ಕಡೆಯಿಂದ ತಳ್ಳಾಟ ನೂಕಾಟ ನಡೆದಿದೆ. ಪೊಲೀಸರು ಲಾಠಿ ಬೀಸಿ ಗುಂಪನ್ನು ಚದುರಿಸಿದ್ದಾರೆ. ಗ್ರಾಹಕಿ ದೂರಿನ ಆಧಾರದ ಮೇಲೆ FIR ದಾಖಲಾಗಿದ್ದು, ಅಂಗಡಿ ಮಾಲೀಕ ಅಂಜನ ಪೈ ಅವರ ಪುತ್ರ ಸುದರ್ಶನ್ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ವರದಿಯಾಗಿದೆ.